ಸ್ವಾತಂತ್ರ್ಯ ಎಂದರೆ ಸ್ವೇಚ್ಛಾಚಾರ ಅಲ್ಲ: ಶ್ರೀ ಇಂಗಳಗಿ ದಾವಲಮಲೀಕ
ಕಾಮನ ಹಳ್ಳಿ: 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಾಮನ ಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಬೆಳಗಿನ 07:30 ಕ್ಕೇ ರಾಷ್ಟ್ರ ಧ್ವಜಾರೋಹಣ ನೆರವೇರಿತು. ರಾಷ್ಟ್ರ ಧ್ವಜಾರೋಹಣವನ್ನು ಶಾಲಾಭಿವೃದ್ದಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣಪ್ಪ ಆನವಟ್ಟಿ ಅವರು ನೆರವೇರಿಸಿದರು. ಸಭೆಯಲ್ಲಿ ಊರಿನ ಹಿರಿಯರು ಶಿಕ್ಷಣ ಪ್ರೇಮಿಗಳಾದ ಶ್ರೀ ಚಿಕ್ಕಪ್ಪ ಹೊಸಮನಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಾಲೆಯ ಅಭಿವೃದ್ಧಿ ಯೋಜನೆ ಕುರಿತು ಮಾತನಾಡಿದರು. ಗ್ರಾಮ ಪಂಚಾಯತಿ ಸದಸ್ಯರುಗಳಾದ ಶ್ರೀ ಚಂದ್ರಪ್ಪ ಆನವಟ್ಟಿ ಹಾಗೂ ಶ್ರೀಮತಿ ಅಂಬವ್ವ ಲಮಾಣಿ ಹಾಜರಿದ್ದರು. ಊರಿನ ಯುವ ಮುಖಂಡರಾದ ಶ್ರೀ ಮಾಲತೇಶ ಆನವಟ್ಟಿ, ಶ್ರೀ ನಾರಾಯಣ ಕಿಳ್ಳಿಕ್ಯಾತರ ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಶ್ರೀದೇವಿ ಕೊಪ್ಪರಸಿಕೊಪ್ಪ,ಆ ಶಾ ಕಾರ್ಯಕರ್ತೆಯರಾದ ಶ್ರೀಮತಿ ಜಯಮ್ಮ ದೇಸಾಯಿ,ಶಾಲಾ ಬಿಸಿಯೂಟ ಸಿಬ್ಬಂದಿಗಳಾದ ಶ್ರೀಮತಿ ಮಂಜುಳಾ ದೇಸಾಯಿ, ಶ್ರೀಮತಿ ಮಲ್ಲಮ್ಮ ಕಿಳ್ಳಿಕ್ಯಾತರ ಹಾಗೂ ಶ್ರೀಮತಿ ಶಾಂತವ್ವ ಕಿಳ್ಳಿಕ್ಯಾತರ ಹಾಜರಿದ್ದರು.ಶಾಲೆಯ ಆಡಳಿತಾತ್ಮಕ ವಿಷಯಗಳ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಎಸ್ ಎನ್ ಸೂಡಂಬಿ ಮಾಹಿತಿ ಒದಗಿಸಿದರು. ಶಾಲೆಯ ಸಹ ಶಿಕ್ಷಕರಾದ ಶ್ರೀಮತಿ ಆರ್ ಪಿ ಕುಂಬಾರ ಮಾತನಾಡಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.ಶಿಕ್ಷಕ ಸಾಹಿತಿ ಶ್ರೀ ಇಂಗಳಗಿ ದಾವಲಮಲೀಕ ಮಾತನಾಡಿ ಸ್ವಾತಂತ್ರ್ಯ ಎಂದರೆ ಸ್ವೇಚ್ಛೆಚಾರ ಅಲ್ಲ
೭೫ನೇ ಸ್ವಾತಂತ್ರ್ಯ ದಿನದ ಸಮಯದಲ್ಲಿ ನಾವು ಭಾರತೀಯ ಪ್ರಜೆಗಳು ಮುಖ್ಯವಾಗಿ ತಿಳಿಯಬೇಕಾದದ್ದು,ಸ್ವಾತಂತ್ರ್ಯ ಎಂದರೆ ಸ್ವೇಚ್ಛೆಯಾಗಿ ಬದುಕುವುದಲ್ಲ.ನಿಜವಾಗಿಯೂ ನಮಗೆ ಸ್ವಾತಂತ್ರ್ಯ ಸಿಕ್ಕಿದಿಯಾ? ಇದೊಂದು ಪ್ರಶ್ನೆ ಏಳುತ್ತದೆ. ಹೌದು ಸ್ವಾತಂತ್ರ್ಯ ಸಿಕ್ಕಿದ್ದೆ ಆದರೆ ಯಾವುದಕ್ಕೆ ಸಿಕ್ಕಿದ್ದು? ಯಾರಿಗೆ ಸಿಕ್ಕಿದ್ದು?ಯಾವಾಗ ಸಿಕ್ಕಿದ್ದು? ಎಲ್ಲಿ ಸಿಕ್ಕಿದ್ದು? ಹೇಗೆ ಸಿಕ್ಕಿದ್ದು? ಕೊಟ್ಟವರು ಯಾರು?ಪಡೆದುಕೊಂಡವರು ಯಾರು?ಸ್ವಾತಂತ್ರ್ಯ ಕೊಡುವಾಗ ಮತ್ತು ಪಡೆದುಕೊಳ್ಳುವಾಗ ಯಾರಿದ್ದರು? ಸ್ವಾತಂತ್ರ್ಯ ಎಂಬುದು ನೋಡಲು ಹೇಗಿದೆ? ಇವೆಲ್ಲವುಗಳಿಗೆ ಉತ್ತರ ಸಿಕ್ಕಾಗ ನಮಗೆ ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದೆ ಎಂದರ್ಥ.ನಮಗೆ ಸ್ವಾತಂತ್ರ್ಯ ಸಿಕ್ಕಿದ್ದೆ ಆದರೆ ಯಾವುದಕ್ಕೆ ಸಿಕ್ಕಿದೆ.ಕಂಡ ಕಂಡ ಕಡೆಗೆ ಹೆಣ್ಣುಮಕ್ಕಳು ಮೇಲೆ ಅತ್ಯಾಚಾರ ಮಾಡಿ ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ವಿಕೃತ ಕಾಮುಕರಿಗೆ ಅಲ್ವ.ಜಗತ್ತು ಕಣ್ಣು ಬಿಡುವ ಮೊದಲು ಹೆಣ್ಣನ್ನು ದೇವರೆಂದು ಪೂಜಿಸಿದ ನಾಡು ನಮ್ಮದು. ಇಂದು ಕೇವಲ ಭೋಗದ ವಸ್ತುವನ್ನಾಗಿ ಬಳಸಿಕೊಂಡು ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅಲ್ಲವೇ? ನಾವು ನಮ್ಮ ಸಂಸ್ಕ್ರತಿಯ ಭವ್ಯ ಪರಂಪರೆಯನ್ನು ಹಾಳು ಮಾಡಿ ಹೊರಟಿರುವ ನಮಗೆ ಸ್ವಾತಂತ್ರ್ಯ ಬೇಕಾ?ಬದುಕನ್ನು ಸ್ವೇಚ್ಛೆಯಾಗಿ ಹರಿದಾಡಲು ಬಿಟ್ಟು ಕಾನೂನಿನ ಕಟ್ಟಳೆಗಳನ್ನು ವಿಧಿಸಿದ್ದೇವೆ.ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರೆ ಆದರೂ ಅದನ್ನು ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಬಹುದಲ್ಲವೆ? ಇದೇ ಅಲ್ಲವೇ? ಸ್ವಾತಂತ್ರ್ಯ. ಸಾವಿರಾರು ಜನರ ಪಾಲಿನ ಒಬ್ಬ ಕ್ರೂರಿ ನಿರಪರಾಧಿಯಾಗಿ ತಪ್ಪಿಸಿಕೊಂಡು ಹೋಗಲು ಅವಕಾಶ ಮಾಡಿಕೊಡುತ್ತದೆ ಇದೇ ಅಲ್ಲವೇ ಸ್ವಾತಂತ್ರ್ಯ. ದೇಶದಲ್ಲಿ ದೇಶದ್ರೋಹಿ ಕಾರ್ಯಗಳನ್ನು ಮಾಡಲು ಅವಕಾಶ ನೀಡುವ ನಮಗೆ ಅಲ್ಲವೇ ಸ್ವಾತಂತ್ರ್ಯ ಸಿಕ್ಕಿದ್ದು. ಹಣವೆಂಬ ಹೊಳೆ ಯಾರ ಮನೆಯಲ್ಲಿ ಹರಿಯುತ್ತದೆಯೋ ಅವರಿಗೆ ಸಿಕ್ಕಿದ್ದು ಸ್ವಾತಂತ್ರ್ಯ. ಒಂದು ಹೊತ್ತಿನ ಊಟಕ್ಕೆ ಗತಿಯಿರದ ಎಷ್ಟೋ ಬೀದಿ ಬೀದಿಗಳಲ್ಲಿ ಮೆರವಣಿಗೆ ಹೊರಟಿರುವ ಹೊಟ್ಟೆಗಳಲ್ಲಿ ಸ್ವಾತಂತ್ರ್ಯ ಇದೆಯಾ?
ಎಂದು ತಿಳಿಸಿದರು. ಕೊನೆಯಲ್ಲಿ ವೇದಿಕೆಯನ್ನು ಶ್ರೀ ಶಾಲೆಯ ಹಿರಿಯ ಶಿಕ್ಷಕರಾದ ಶ್ರೀ ಡಿ ಹೆಚ್ ಮಾದರ ವಂದಿಸಿದರು.
(ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ 9448713659 ವಾಟ್ಸಪ್ ಮಾತ್ರ)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ