ಮಂಗಳವಾರ, ಆಗಸ್ಟ್ 2, 2022

ಬಾ ಮಳೆಯೇ ಬಾ (ಕವಿತೆ) - ಶಾಂತಾರಾಮ ಶಿರಸಿ.

ನಾನು ನಿನಗಾಗಿ ಕಾದಿರುವ ಕಡಲು,
ಹನಿ ಹನಿಯಾಗಿ ಸುರಿದು,
ಈ ಭುವಿಯ ದಾಹವ ಇಂಗಿಸಲು,
ಮನುಜರು ಮಾಡಿಹ ಕೊಳೆಯ ತೊಳೆದು ಸ್ವಚ್ಚಾವಾಗಿಸು ಬಾ,
ಮಿಕ್ಕಿದ್ದು ನೀರಾಗಿ ಉಕ್ಕಿ ಹರಿಯಲು,
ಬಾ ಮಳೆಯೇ ಬಾ
ಕಡಲ ಒಡಲ ಸೇರಲು..

ಬಿಸಿಯಾಗಿ ಒಣಗಿಹ ಈ ಭೂ ಸಿರಿಯ ತಣಿಸಿ ಹಸಿರಾಗಿಸು ಬಾ,
ಭುವಿಯ ಉಳುವ ರೈತನ ಮೊಗದಲಿ ನಗುವ ತರಿಸು ಬಾ,
ಹನಿಗಳಾಗಿ ಸುರಿದು ಬೇಸರದಿ ಮನಕೆ ನೀರಾಗಿ ಸೋಕಿ ಅಪ್ಪಿಕೊಳ್ಳು ಬಾ,
ನಿನ್ನ ಹನಿಗಳಲ್ಲಿ ಮೈ ಒಡ್ಡಿ ಕುಣಿಯಬೇಕೆಂಬ ಈ ಮನದಾಸೆಯ ತೀರಿಸಲು ಬಾ ಮಳೆಯೇ ಬಾ...

- ಶಾಂತಾರಾಮ ಶಿರಸಿ,
ಉತ್ತರ ಕನ್ನಡ..
7676106237



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...