ಯಾರಿಗಾಗಿ-ಯಾವುದಕ್ಕಾಗಿ,
ಎಲ್ಲವೂ ತಾಯ್ನೆಲ-ದೇಶದ ಋಣವ ತೀರಿಸುವ ಸಲುವಾಗಿ,
ಪರರ ದಾಸ್ಯದಿಂದ ದೇಶವ ಸ್ವತಂತ್ರವಾಗಿಸಲು-ಸ್ವತಂತ್ರರಾಗಿ ಬದುಕುವುದಕ್ಕಾಗಿ,
ನಾವು ಇಂದು ಬದುಕಿ ಬಾಳುತ್ತಿದ್ದೇವೆಂದರೆ ನಿಮ್ಮ ತ್ಯಾಗ-ಬಲಿದಾನಗಳಿಂದಾಗಿ...
ನಲವತ್ತೇಳರಲ್ಲಿ ಸಿಕ್ಕ ಸ್ವಾತಂತ್ರ್ಯ,
ಅಲ್ಲಿಂದ ಎಲ್ಲವ ಸಹಿಸಿ ಬಹುದೂರ ಸಾಗಿಬಂದೆಯಾ,
ಕಳೆದಾಗಿದೆ ಸ್ವಾತಂತ್ರ್ಯ ಸಿಕ್ಕು ಎಪ್ಪತೈದು ವರುಷ,
ಎಪ್ಪತೈದರ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿಕೊಳ್ಳುವ ಹರುಷ...
ಸ್ವಾತಂತ್ಯ ಸಿಕ್ಕು ಸಂಭ್ರಮಿಸುವ ದೇಶದ ಜನತೆ ಎಲ್ಲೆಡೆ,
ವಿವಿಧತೆಯಲ್ಲಿ ಏಕತೆ ಸಾಧಿಸಿ ರಾಷ್ಟ್ರ ತಿರಂಗಾ ಮುಗಿಲೆತ್ತರ ಹಾರಿಸಿ ಸಂಭ್ರಮಿಸುತ್ತಿರುವ ನಡೆ,
ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮಿಸುವುದು ಪ್ರತಿ ಪ್ರಜೆಯ ಹಕ್ಕಿದು,
ಕೊನೆಗೆ ಸ್ವತಂತ್ರರು ನಾವು ಸ್ವತಂತ್ರರು ಬರಿಯ ಕೂಗಾಗಿಹುದು,
ಎಲ್ಲಿಗೆ-ಯಾರಿಗೆ-ಹೇಗೆ ಎಂದು ಪರಿಸ್ಥಿತಿಯ ತೋರಿದರೆ ಯಾರಿಂದಲೂ ಉತ್ತರ ಸಿಗದು..
ನಮ್ಮ ರಾಷ್ರ್ಟ-
ತಾಯಿ ಭಾರತಮಾತೆಗೆ ಕರ ಜೋಡಿಸಿ ನಮಸ್ಕರಿಸುವ,
ತಾಯ್ನೆಲ-ಜಲ, ಯೋಧರು-ರೈತರು,
ಪ್ರತಿಯೊಬ್ಬರಿಗೂ ಗೌರವ ಸಲ್ಲಿಸುವ...
- ಶಾಂತಾರಾಮ ಶಿರಸಿ,
ಉತ್ತರ ಕನ್ನಡ...
7676106273
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ