ಗುರುವಾರ, ಜೂನ್ 22, 2023

ಕಣ್ಣು ಮಣ್ಣಾಗದಿರಲಿ ಬೇರೊಬ್ಬರ ಬಾಳಿಗೆ ಹೊನ್ನಾಗಲಿ (ಲೇಖನ) - ಶಿವನಗೌಡ ಪೋಲಿಸ್ ಪಾಟೀಲ.

ಮನುಷ್ಯನ ದೇಹದಲ್ಲಿರುವ ಒಂದು ಅವಿಭಾಜ್ಯ ಅಂಗವೆಂದರೆ ಅದು ಕಣ್ಣು. ಪ್ರಪಂಚವನ್ನು ಇಷ್ಟು ಸುಂದರವಾಗಿ ಕಾಣಲು ಕಾರಣವೇ ಕಣ್ಣು.ನಮ್ಮ ದೇಶದಲ್ಲಿ ಇಂದಿಗೂ ಒಂದು ಅಂದಾಜಿನ ಪ್ರಕಾರ 50 ಲಕ್ಷಕ್ಕೂ ಅಧಿಕ ಪುರುಷರೂ, ಮಹಿಳೆಯರೂ ಹಾಗೂ ಮಕ್ಕಳು ಅಂಧರಾಗಿ ಜೀವನ ನಡೆಸುತ್ತಿದ್ದಾರೆ. ಇವರೆಲ್ಲರೂ ಯಾವತ್ತೂ ಸೂರ್ಯನ ಕಿರಣಗಳನ್ನು ಕಂಡಿಲ್ಲ. ಪೂರ್ಣ ಹುಣ್ಣಿಮೆ ಚಂದ್ರನ ಸವಿ ಸವಿದಿಲ್ಲ. ಇಂಥವರಿಗೆ ಸಹಾಯ ಮಾಡುವ ಮನಸ್ಸು ನಾವೆಲ್ಲಾ ಮಾಡಬೇಕು. ನೇತ್ರದಾನ ಮಾಡುವವರ ಸಂಖ್ಯೆ ಇನ್ನೂ ಹೆಚ್ಚಬೇಕು. ಈ ನಿಟ್ಟಿನಲ್ಲಿ ಸಮಾಜದ ಸಂಘ ಸಂಸ್ಥೆಗಳು ಪ್ರಜ್ಞಾವಂತರು ಜಾಗೃತಿ ಮೂಡಿಸಬೇಕು.
ಭಾರತದಲ್ಲಿ ಸುಮಾರು 6.8 ಮಿಲಿಯನ್‌ ಜನರಿಗೆ ಕಾರ್ನಿಯಲ್‌ ಅಂಧತ್ವ ಇದೆ. ಈ ಸಂಖ್ಯೆ 2021ರ ವೇಳೆಗೆ 10.6 ಮಿಲಿಯನ್‌ಗೆ ಏರುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು
" ಒಬ್ಬ ವ್ಯಕ್ತಿಯು ತನ್ನ ಮರಣಾನಂತರ ನೇತ್ರಗಳನ್ನು ದಾನ ಮಾಡುವುದಾಗಿ ಶಪಥ ಮಾಡುವುದೇ ನೇತ್ರದಾನವಾಗಿದೆ. ವ್ಯಕ್ತಿಯು ತನ್ನ ನೇತ್ರಗಳನ್ನು ದಾನ ಮಾಡುವುದರಿಂದ ಇಬ್ಬರು ವ್ಯಕ್ತಿಗಳ ಬದುಕಿನಲ್ಲಿ ಬೆಳಕು ಮೂಡುತ್ತದೆ.
 
# ಒಬ್ಬ ವ್ಯಕ್ತಿ ಸತ್ತ 6 ಗಂಟೆಯ ಒಳಗಡೆ ನೇತ್ರದಾನದ ಕಾರ್ಯ ನಡೆಯಬೇಕು.
# ಸತ್ತ ಮೇಲೆ ಐಸ್‌ನಲ್ಲಿ ಶೀತಲೀಕರಣ ಮಾಡಿದ್ದರೆ 11 ಗಂಟೆಯ ಒಳಗಡೆ ನೇತ್ರದಾನದ ಕಾರ್ಯ ಮಾಡಬಹುದಾಗಿದೆ. 
# ವ್ಯಕ್ತಿಯ ಮರಣಾನಂತರ ಮೃತರ ಸಂಬಂಧಿಕರು ಕೂಡಲೇ ನೇತ್ರಭಂಡಾರಕ್ಕೆ ಮಾಹಿತಿ ನೀಡಬೇಕು. # ವ್ಯಕ್ತಿ ಬದುಕಿರುವಾಗಲೇ ಹೆಸರನ್ನು ನೇತ್ರ ಭಂಡಾರದಲ್ಲಿ ನೊಂದಾಯಿಸುವುದರಿಂದ ನೇತ್ರ ಭಂಡಾರದ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಲು
# ತಮ್ಮ ಕಣ್ಣುಗಳನ್ನು ಸಾವಿನ ನಂತರ ಯಾವುದೇ ವಯಸ್ಸು , ಲಿಂಗ ಅಥವಾ ಸಾಮಾಜಿಕ ಸ್ಥಿತಿ ಪರಿಗಣಿಸದೆ ಯಾವುದೇ ವ್ಯಕ್ತಿ ಕಣ್ಣುಗಳನ್ನು ದನ ಮಾಡಬಹುದು. 
# ಕನ್ನಡಕ ಧರಿಸುವವರು, ಕಾಂಟ್ಯಾಕ್ಟ್ ಲೆನ್ಸ್‌ ಧರಿಸುವವರು, ಯಶಸ್ವಿಯಾಗಿ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡವರು , ಸಕ್ಕರೆ ಕಾಯಿಲೆ, ಬ್ಲಿಡ್‌ ಪ್ರಶರ್‌ ಇರುವವರು, ಅಸ್ತಮಾದವರು ಯಾರು ಕೂಡಾ ಅವರ ಕಣ್ಣುಗಳನ್ನು ದಾನ ಮಾಡಬಹುದು.
# ಕುಟುಂಬದವರಿಂದ ಯಾವುದೇ ಶುಲ್ಕ ಪಡೆಯುವು ದಿಲ್ಲ. ನೇತ್ರ ಸಂಗ್ರಹಣಾ ಕೇಂದ್ರದವರು ದಾನಿಗಳ ಮನೆಗೆ ಅಥವಾ ಮೃತಪಟ್ಟ ಸ್ಥಳಕ್ಕೆ ಬರುತ್ತಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದು ಉಚಿತ ಸೇವೆಯಾಗಿದೆ.

ವ್ಯಕ್ತಿಯು ಸತ್ತ ಕೂಡಲೇ ಏನು ಮಾಡಬೇಕು?
– ವ್ಯಕ್ತಿಯು ಸತ್ತ ಕೂಡಲೇ ಕಣ್ಣನ್ನು ಮುಚ್ಚಬೇಕು.
– ಫ್ಯಾನನ್ನು ಆರಿಸಬೇಕು. ಯಾವುದೇ ಕಾರಣಕ್ಕೂ ಫ್ಯಾನಿನ ಗಾಳಿ ನೇರವಾಗಿ ಕಣ್ಣಿಗೆ ಬೀಳಬಾರದು.
-ತಲೆಯನ್ನು 6 ಇಂಚಿನಷ್ಟು ಎತ್ತರಕ್ಕೆ ತಲೆದಿಂಬಿನಿಂದ ಎತ್ತರಿಸಬೇಕು. ಇದರಿಂದ ಕಣ್ಣು ತೆಗೆಯುವಾಗ ಕಡಿಮೆ ರಕ್ತಸ್ರಾವ ಆಗುತ್ತದೆ.
-ತಣ್ಣಗಿನ ಬಟ್ಟೆ ಅಥವಾ ಐಸ್‌ಕ್ಯೂಬನ್ನು ಹಣೆಯ ಮೇಲೆ ಇಡಬೇಕು.
-ಸಾಧ್ಯವಾದರೆ ಆ್ಯಂಟಿಬಯೋಟಿಕ್‌ ಕಣ್ಣಿನ ಡ್ರಾಪ್ಸ್‌ ಹಾಕುವುದರಿಂದ ಸೋಂಕನ್ನು ತಡೆಗಟ್ಟಬಹುದು.
-ಆದಷ್ಟು ಬೇಗನೆ ಹತ್ತಿರದ ನೇತ್ರ ಭಂಡಾರಕ್ಕೆ ತಿಳಿಸಬೇಕು.
-ಸರಿಯಾದ ವಿಳಾಸವನ್ನು ಫೋನ್‌ ನಂಬರನ್ನೂ ತಿಳಿಸಿದರೆ ನೇತ್ರ ಭಂಡಾರದ ಕಾರ್ಯಕರ್ತರು ಸರಿಯಾದ ಸಮಯಕ್ಕೆ ತಲುಪಬಹುದು.
-ಮರಣ ಪತ್ರ ಇದ್ದರೆ ಅದನ್ನು ರೆಡಿ ಇಡಬೇಕು.
-ನೇತ್ರದಾನದ ಕಾರ್ಯ ಶುರು ಮಾಡಲು ಇಬ್ಬರು ಒಪ್ಪಿಗೆ ಸಹಿ ಇರಬೇಕು.


 ಕಣ್ಣಿಗೆ ದೃಷ್ಟಿ ಕೊಟ್ಟದ್ದು ಸೃಷ್ಟಿ
 ನೇತ್ರದಾನ ಮಾಡುವುದು ಕೃಪಾದೃಷ್ಟಿ
 ಅಂದರಿಗೆ ನೀಡಿ ನಿಮ್ಮ ದೃಷ್ಟಿ
 ಅದರಿಂದ ಆಗುವುದು ಸುಂದರ ಲೋಕ ಸೃಷ್ಟಿ.....

- ಶಿವನಗೌಡ ಪೋಲಿಸ್ ಪಾಟೀಲ. ನವಲಹಳ್ಳಿ, ಕೊಪ್ಪಳ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ವತಿಯಿಂದ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ.‌

ದಿನಾಂಕ 1-7 2025, ಬೇಲೂರು:  ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಬೇಲೂರು ಘಟಕದ ವತಿಯಿಂದ ಬೇಲೂರಿನ ವೈಷ್ಣವಗೋಷ್ಠಿಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಬೇಲೂ...