ಶುಕ್ರವಾರ, ಅಕ್ಟೋಬರ್ 27, 2023

ಆತ್ಮವೇ ನೀ ತೊರೆದ ದಿನ (ಕವಿತೆ) - ಬಿ. ಎಂ. ಮಹಾಂತೇಶ.

ಅಂಗಳದಲಿ ಹಾಳು
ಕಸವು, ಧೂಳಾಗಿ
ದೇಹದ ಸುತ್ತ ಸುಳಿದಿತ್ತು...

ನಿನ್ನೆ ನಲಿದಿದ್ದ ಹಾಲು
ಇಂದು ನಲುವಿನಲ್ಲಿ
ಮೊಸರಾಗಿ ಅಳುತಿತ್ತು...

ನನ್ನ ತಲೆ ಬಳಿಯ
ಕಂದೀಲು ನನಗಷ್ಟೇ,
ಮೌನದ ಬೆಳಕ ನೀಡಿತ್ತು...

ಹೇ ಆತ್ಮವೇ ನೀ ನನ್ನ
ತೊರೆದ ಸುದ್ದಿಯ ಸಾರಲು,
ಕಾಗೆಯು ಗೊಗರೆದಿತ್ತು...

ಮಸಣದ ಮಣ್ಣು
ಮೈಗಪ್ಪಲು, ಸಪ್ಪನೆ
ಮಾರಿ ಹಾಕಿ ಚದುರಿತ್ತು...

ಹೇ ಆತ್ಮವೇ ನೀ ತೊರೆದ ಆ ದಿನ..
ಆವರಿಸಿದ್ದು ಬರಿ ಮೌನ...

- ಬಿ. ಎಂ. ಮಹಾಂತೇಶ
SAVT ಕಾಲೇಜು ಕೂಡ್ಲಿಗಿ 
ವಿಜಯನಗರ ಜಿಲ್ಲಾ
9731418615.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ವತಿಯಿಂದ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ವೈದ್ಯ ದಿನಾಚರಣೆ.‌

ದಿನಾಂಕ 1-7 2025, ಬೇಲೂರು:  ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಬೇಲೂರು ಘಟಕದ ವತಿಯಿಂದ ಬೇಲೂರಿನ ವೈಷ್ಣವಗೋಷ್ಠಿಯಲ್ಲಿ ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಬೇಲೂ...