ಅಂಗಳ ಕಮ್ಯುನಿಟಿ ಟ್ರಸ್ಟ್ (ರಿ.) ಇವರ ವಿಚಾರ ಮಂಟಪ ಸಾಹಿತ್ಯ ಪತ್ರಿಕೆ. ಸಾಹಿತ್ಯ ವಿಚಾರಗಳ ಪ್ರಸರಣೆ, ಹಾಗೂ ಸಾಹಿತ್ಯ ರಚನೆಗೆ ಪೋಷಣೆ ನೀಡುವ ಮತ್ತು ಸೂಕ್ತ ವೇದಿಕೆಯನ್ನು ಕಲ್ಪಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಆನ್ ಲೈನ್ ಪತ್ರಿಕೆ. ಹೆಚ್ಚಿನ ವಿವರಗಳಿಗಾಗಿ ಮತ್ತು ನಿಮ್ಮ ಬರಹಗಳ ಪ್ರಕಟಣೆಗಾಗಿ ಸಂಪರ್ಕಿಸಿ: Vicharamantapapatrike@gmail.com # 63633 53166
ಶುಕ್ರವಾರ, ಆಗಸ್ಟ್ 15, 2025
79 ನೇ ಸ್ವಾತಂತ್ರ್ಯೊತ್ಸವ..
ಬೆಂಗಳೂರಿನ ಬಹುತೇಕ ಮಳಿಗೆಗಳು ಸೇರಿದಂತೆ ವ್ಯಾಪಕ ಕೇಂದ್ರಗಳು ಸೇಲ್ ಗಳ ಪೈಪೋಟಿಯಲ್ಲಿ ತೊಡಗಿವೆ. ದೊಡ್ಡ ದೊಡ್ಡ ಮಾಲ್ ಗಳು ನವವಧುವಿನಂತೆ ಕಂಗೊಳಿಸುತ್ತ ಶೃಂಗಾರಗೊಂಡಿವೆ. ಒಂದು ಕೊಂಡರೆ ಇನ್ನೊಂದು ಉಚಿತ ಅಷ್ಟು ರಿಯಾಯಿತಿ ಇಷ್ಟು ರಿಯಾಯಿತಿ ಅದು ಕೊಂಡರೆ ಇದು ಪ್ರೀ.. ಎಂಬ ಟಿವಿ ಜಾಯಿರಾತು ಮತ್ತು ಬ್ಯಾನರ್ ಗಳಿಂದ ಪ್ರಚಾರವಾಗುತ್ತಿವೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ಗೌರಿ ಗಣೇಶ ಹಬ್ಬದ ಸಡಗರ. ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ನಾವು ಆಚರಿಸುತ್ತೇವೆ. ನಾವೆಲ್ಲರೂ ಭಾರತೀಯರು ಎಂದು ಜಾತಿ, ಮತ, ಭೇದವಿಲ್ಲದೆ ಸಂಭ್ರಮಿಸುವ ದಿನವಿದು 78 ವಸಂತಗಳನ್ನು ಪೂರೈಸಿ 79ನೇ ಸ್ವಾತಂತ್ರೋತ್ಸವವನ್ನು ಆಚರಿಸುತ್ತಿದ್ದೇವೆ. ಈ ದಿನಾಚರಣೆಯ ದಿನದಂತ ದೇಶಭಕ್ತಿಯ ಹಾಡುಗಳು ಭಾಷಣಗಳು ಕಲೆ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಾರುವ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯುತ್ತವೆ. ನಾವೆಲ್ಲರೂ ಭಾರತೀಯರು ಧರ್ಮ, ಜಾತಿ ಭಾಷೆ ಕುಲಗೋತ್ರ ಬಡವ, ಶ್ರೀಮಂತರು, ವಿದ್ಯಾವಂತ, ಅವಿದ್ಯಾವಂತ ಎಂಬ ಭೇದವಿಲ್ಲದೇ ನಮ್ಮ ಭಾರತ ದೇಶವನ್ನು ಪ್ರತಿಯೊಬ್ಬ ಪ್ರಜೆಯು ಪ್ರೀತಿಸುತ್ತಾನೆ. ಪ್ರೀತಿಸಲೇಬೇಕು, ಏಕೆಂದರೆ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣಗಳನ್ನೇ ಬಲಿದಾನ ಮಾಡಿದ್ದಾರೆ. ಸ್ವಾತಂತ್ರ್ಯನಂತರ ನಾವು ಸಾಕಷ್ಟು ಪ್ರಗತಿಯನ್ನು ಸಾಧಿಸಿದ್ದೇವೆ. ಕೃಷಿ ವಿದ್ಯೆ, ಆರೋಗ್ಯ, ಕೖೆಗಾರಿಕೆ, ಕಲೆ, ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ, ಸಿನಿಮಾ, ಕ್ರೀಡೆ ಇತ್ಯಾದಿ ರಂಗದಲ್ಲಿ ನಮ್ಮ ದೇಶ ಮುಂದುವರೆದೆ ರಾಷ್ಟ್ರಗಳ ಶ್ರೇಣಿಯಲ್ಲಿ ಇದೆ. ಪ್ರಗತಿ ಪಥದಲ್ಲಿರುವ ಈ ದೇಶದ ಪ್ರಗತಿ ನಮ್ಮ ಪ್ರಗತಿ ಎಂಬ ಭಾವನೆ ಸದಾ ನಮ್ಮಲ್ಲಿರಬೇಕು. " ಸತ್ಯಮೇವ ಜಯತೇ" ಇದು ನಮ್ಮ ರಾಷ್ಟ್ರೀಯ ದ್ಯೇಯವಾಕ್ಯ, ಈ ದ್ಯೇಯವಾಕ್ಯದ ಪರಿಪಾಲನೆ ಎಷ್ಟಾಗುತ್ತಿದೆ. ಎಲ್ಲ ಕಡೆ ಸುಳ್ಳು ವ್ಯಾಪಿಸಿಕೊಂಡು ಬಿಟ್ಟಿದೆ. ವಂಚೆನೆ, ಮೋಸ ಲಂಚ ಇಲ್ಲದೇ ಇಂದು ಯಾವ ವ್ಯವಹಾರಗಳು ಕೂಡಾ ನಡೆಯುತ್ತಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹಿಳೆಯರು ಕೂಡ ಹೋರಾಡಿದ್ದಾರೆ. ದೇಶವನ್ನು ಗೌರವಿಸುವ ನಾವು ಮಹಿಳೆಯರನ್ನು ಗೌರವಿಸಬೇಕು. ತಾಯಿ ಎಂಬ ಗೌರವ, ಮಗಳೆಂಬ ವಾತ್ಸಲ್ಯ. ಅತ್ತೆ ಎಂಬ ಅಭಿಯಾನ. ಸೊಸೆ ಎಂಬ ಪ್ರೀತಿ ಸಹೋದರ ಸಹೋದರಿಯರ ಪ್ರೀತಿ ಭಾಂದವ್ಯ. ನಾವೆಲ್ಲರೂ ಒಂದೇ ನಮ್ಮೆಲ್ಲರ ಸೃಷ್ಟಿಕರ್ತನು ಒಬ್ಬನೆ ಆಗಿರುವಾಗ ನಾವೆಲ್ಲರೂ ಒಂದೇ ಸಹೋದರ ಸಹೋದರಿಯಾಗಿ ಒಂದೇ ದೇಶದ ನಿವಾಸಿಗಳಾಗಿ ಜಾತಿ ಮತ ಧರ್ಮ ಭಾಷೆ ಭೇದವಿಲ್ಲದೇ ನಾವು ಭಾರತೀಯರು ಎಂಬ ಒಗ್ಗಟ್ಟು ಹಾಗು ಏಕತೆಯನ್ನು ಪ್ರದರ್ಶಿಸಬೇಕಾಗಿದೆ. " ಸ್ವಾತಂತ್ರ್ಯ ದಿನಾಚರಣೆ" ಎನ್ನುವುದು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದ ನಾವೆಲ್ಲರು ಒಂದೇ ಎಂಬ ಭಾವನೆಯನ್ನು ಗಟ್ಚಿಗೊಳಿಸೋಣ ಸ್ವಾತಂತ್ರ್ಯ ದಿನಾಚರಣೆಯ ಎಲ್ಲಾರು ಸಡಗರ ಸಂಭ್ರಮದಿಂದ ಆಚರಿಸೋಣ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ನೊಂದವಳು(ಸಣ್ಣಕಥೆ) - ಎಂ.ಆಶಾಕಿರಣ್
ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...
-
ಶ್ರೀಮತಿ ಆಶಾಕಿರಣ ಬೇಲೂರು. ಶಿಕ್ಷಕರು, ಬರಹಗಾರರು ಹಾಗೂ ಸಾಮಾಜ ಸೇವಕರು. ಬೇಲೂರು, ಹಾಸನ ಜಿಲ್ಲೆ. ಇವರು ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ 14 ನೇ ವಾರ್ಷಿಕೋತ್ಸವ...
-
ಗೌಳ ದೇಶದ ಅರಸ ಇಂದ್ರದ್ಯುಮ್ನನು, ಸಂಸಾರ ಬಂಧನವ ತೊರೆದನು ದೊರೆಯ ಪಟ್ಟವೇ ನನಗೆ ಬೇಡವೆಂದನು ದಿನವೂ ಹರಿನಾಮ ಜಪವೇ ಸಾಕೆಂದನು. ಸುಂದರ ತಪ್ಪಲಿನಲ್ಲಿ ಕುಳಿತನು ...
-
ಲೇಖನ ವಿಲಕ್ಷಣ ನಗೆಯ ಶುಕುನಿ ಪಾತ್ರದಾರಿ ಡಿ.ವಿ.ನಾಗಮೋಹನ್ ಪೌರಾಣಿಕ ನಾಟಕ ಕುರುಕ್ಷೇತ್ರದಲ್ಲಿ ಬರುವ ಒಂದು ವಿಲಕ್ಷಣ ಪಾತ್ರ ಶಕುನಿ. ಈ ನಾಟಕದಲ್ಲಿ ಎಲ್ಲಾ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ