ಶುಕ್ರವಾರ, ಆಗಸ್ಟ್ 15, 2025

ಹೃದಯದಿ ಮೊಳಗಲಿ ವಂದೇ ಮಾತರಂ..

ಹೃದಯದಿ ಮೊಳಗಲಿ ವಂದೇ ಮಾತರಂ
( 79ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು )

ಮತ್ತೆ ಬಂದಿದೆ ಸಂಭ್ರಮದ ಸ್ವಾತಂತ್ರ್ಯ ದಿನವು 
ಹಾರಲಿ ಕೆಂಪು ಕೋಟೆಯ ಮೇಲೆ ತಿರಂಗವು 
ಅರ್ಪಿಸೋಣ ಭಾರತ ಮಾತೆಗೆ ಸ್ವಾತಂತ್ರ್ಯದ ಹೋರಾಟವು 
ಹೇಳಲಿ ವಂದೇ ಮಾತರಂ ಪ್ರತಿ ಹೃದಯವು

ಸಿಗಲಿ ಸ್ವಾತಂತ್ರ್ಯ ರೈತ ಬೆಳೆದ ಬೆಳೆಗಳಿಗೆ 
ಸಿಗಲಿ ಸ್ವಾತಂತ್ರ್ಯ ವರದಕ್ಷಿಣೆ ಕೊಡುವ ಹೆತ್ತವರಿಗೆ 
ಸಿಗಲಿ ಸ್ವಾತಂತ್ರ್ಯ ಭ್ರಷ್ಟಾಚಾರಕ್ಕೆ ಒಳಗಾಗುವ ಅಮಾಯಕರಿಗೆ 
ಸಿಗಲಿ ಸ್ವಾತಂತ್ರ್ಯ ಒಂಟಿಯಾಗಿ ತಿರುಗುವ ಹೆಣ್ಣು ಮಕ್ಕಳಿಗೆ 

ಭಾರತದ ವೈಭವ ಕೇಸರಿ ಬಿಳಿ ಹಸಿರು ಧ್ವಜದಲಿ 
ನಿತ್ಯ ವಂದೇ ಮಾತರಂ ಹೃದಯದಿಂದ ಮೊಳಗಲಿ 
ನಮ್ಮ ಬಾವುಟ ಸೂರ್ಯನ ಹೊಂಗಿರಣದಂತೆ ಹೊಳೆಯುತ್ತಿರಲಿ
ಇಡೀ ವಿಶ್ವದಲ್ಲಿಯೇ ಭಾರತ ಶ್ರೇಷ್ಠ ಗುರುವಾಗಲಿ

ಸ್ವಾತಂತ್ರ್ಯ ದಿನ ಮೀಸಲಿರದಿರಲಿ ಕೇವಲ ಒಂದು ದಿನಕ್ಕೆ 
ಸ್ಮರಿಸಿ ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರತಿ ಕ್ಷಣಕ್ಕೆ 
ಅವರ ನೆನಪು ಆಗದಿರಲಿ ಕೇವಲ ಪೊಳ್ಳು ಭಾಷಣಕ್ಕೆ 
ಬೆಳೆಸಿ ಉಳಿಸಿ ಸಂಸ್ಕೃತಿ ಪರಂಪರೆ ಪ್ರತಿ ಜನ್ಮಕ್ಕೆ

ದೇಶ ಸೇವೆಯೇ ಈಶ ಸೇವೆ ಎನ್ನುವ  
ಹುತಾತ್ಮರಾದ ರಾಷ್ಟ್ರ ನಾಯಕರನ್ನು ನಿತ್ಯ ಸ್ಮರಿಸುವ
ಉಳಿಸಿ ಬೆಳೆಸಿರಿ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನವ 
ಮುಡಿಪಾಗಿರಲಿ ದೇಶದ ಅಭಿವೃದ್ಧಿಗೆ ನಮ್ಮ ಜನ್ಮವ

ಸ್ಮರಿಸೋಣ ಮಾಡು ಇಲ್ಲವೇ ಮಡಿ ಎಂದ ಗಾಂಧೀಜಿಯನು 
ಸ್ವರಾಜ್ಯವೇ ನನ್ನ ಜನ್ಮಸಿದ್ಧ ಹಕ್ಕು ಎಂದ ತಿಲಕರನು
ಇಂಕ್ವಿಲಾಬ್ ಜಿಂದಾಬಾದ್ ಎಂದ ಭಗತ್ ಸಿಂಗ್ ರನು 
ಜೈ ಹಿಂದ್ ಎಂದಿರುವ ಸುಭಾಷ್ ಚಂದ್ರ ಬೋಸ್ ರನು
ಶ್ರೀ ಮುತ್ತು ಯ ವಡ್ಡರ
 ಶಿಕ್ಷಕರು,ಹಿರೇಮಾಗಿ
ಬಾಗಲಕೋಟ 
9845568484

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...