ಬುಧವಾರ, ಸೆಪ್ಟೆಂಬರ್ 17, 2025

ವರದಿ..

ವರದಿ

ನಾಟಕಕಾರ ಗೊರೂರು ಅನಂತರಾಜು ಅವರಿಗೆ ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದಿಂದ ರಂಗ ಪುರಸ್ಕಾರ 

ಬೆಂಗಳೂರಿನ ಚಲನಚಿತ್ರ ಹಾಸ್ಯನಟರು ಮೈಸೂರು ರಮಾನಂದ್ ಸಾರಥ್ಯದ ಹೆಜ್ಜೆ ಗೆಜ್ಜೆ ರಂಗ ತಂಡದ 50ನೇ ವರ್ಷದ ಪಾದಾರ್ಪಣೆಯ ಸಂಭ್ರಮ ಹಾಗೂ ಆಶಾನಾದಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಮಕ್ಕಳ ನಾಟಕ ಕೃತಿ ಲೋಕಾರ್ಪಣಿ, ರಂಗ ಸಂಗೀತ, ನಾಟಕ ಪ್ರದರ್ಶನ ಕಾರ್ಯಕ್ರಮ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಹಾಸನದ ಸಾಹಿತಿಗಳು ನಾಟಕಕಾರರು ಶ್ರೀ ಗೊರೂರು ಅನಂತರಾಜು ರವರ ಕಲಾ ಸೇವೆ ಸಾಂಸ್ಕೃತಿಕ ಸಂಘಟನೆ, ನಾಟಕ, ಸಾಹಿತ್ಯ ಸೇವೆ ಗುರುತಿಸಿ ರಂಗ ಪುರಸ್ಕಾರವನ್ನು ಹೆಜ್ಜೆ ಗೆಜ್ಜೆ ತಂಡದ ಸಂಸ್ಥಾಪಕ ಅಧ್ಯಕ್ಷರು ಮತ್ತು ಚಲನಚಿತ್ರ ನಟರು ಶ್ರೀ ಮೈಸೂರು ರಮಾನಂದ್ ಅವರು ನೀಡಿ ಸನ್ಮಾನಿ ದರು. ಸಾಹಿತ್ಯ ಕ್ಷೇತ್ರದಲ್ಲಿ 50ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ, ಸಾಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮ ಕ್ರಿಯಾಶೀಲ ವ್ಯಕ್ತಿತ್ವದಿಂದ ರಂಗಭೂಮಿ ನಟರು, ಗಾಯಕರು, ನೃತ್ಯ ಚಿತ್ರ ಕಲಾವಿದರು ಮೊದಲಾಗಿ ಪ್ರತಿಭ್ವಾನಿತ ಕಲಾವಿದರನ್ನು ಸಂದರ್ಶಿಸಿ ಪತ್ರಿಕೆಗಳ ಮೂಲಕ ಜನತೆಗೆ ಪರಿಚಯಿಸುವ ಸದಾ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿರುವ ಲೇಖಕರು ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ರಾಜ್ಯ ಸಾಹಿತ್ಯ ಸಾಂಸ್ಕೃತಿಕ ಸಂಘಟನೆಯ ಗೌರವ ಅಧ್ಯಕ್ಷರು ಶ್ರೀ ಗೊರೂರು ಅನಂತರಾಜು ರವರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸೇವೆಯು ಸಮಾಜಕ್ಕೆ ಇನ್ನೂ ಹೆಚ್ಚಿನದಾಗಿ ದೊರೆಯಲೆಂದು ಶುಭ ಹಾರೈಸಿ ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ರಾಜ್ಯಾಧ್ಯಕ್ಷರು ಶ್ರೀ ಮಧು ನಾಯ್ಕ್ ಲಂಬಾಣಿಯವರು ಅಭಿನಂದಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನೊಂದವಳು(ಸಣ್ಣಕಥೆ) - ಎಂ.‌ಆಶಾಕಿರಣ್

ಈ ಕಥಾನಾಯಕಿಯ ಹೆಸರು ಕುಸುಮ, ಇವಳು ಹಳ್ಳಿಯಲ್ಲಿ ಒಂದು ಬಡಕುಟುಂಬದಲ್ಲಿ ಜನಿಸುತ್ತಾಳೆ. ಇವಳ ತಂದೆಗೆ  ಗಂಡು ಮಗು ಬೇಕೆಂಬ ಹಂಬಲ, ಇದರ ಫಲವಾಗಿ ಇವನಿಗೆ ನಾಲ್ಕು ಹೆಣ್ಣುಮಕ...